ಪತ್ನಿಯ ಕತ್ತು ಸೀಳಿ ಕೊಲೆಗೈದು ಪರಾರಿಯಾದ ಪತಿ
ಸಕಲೇಶಪುರ : ಪತಿ-ಪತ್ನಿಯ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ತಾಲೂಕಿನ ಹೆತ್ತೂರು ಹೋಬಳಿ ಹಿರಿಯೂರು ಕೂಡಿಗೆಯ ಮಂಜುಳಾ ಕೊಲೆಯಾದ ದುರ್ದೈವಿ . ಪತಿ ಯೋಗೇಶ್ ಪೂಜಾರಿ ತನ್ನ ಪತ್ನಿಯ ಕತ್ತು ಕುಯ್ದು ಮನೆಯ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.