*ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ; ರಾಜ್ಯದ ಈ ಸಮುದಾಯ STಗೆ ಸೇರ್ಪಡೆ..!*
**********************************
ಹಾವೇರಿ:- ರಾಜ್ಯದ ಗಂಗಾಮತವನ್ನು ಶೀಘ್ರವೇ ಎಸ್ಟಿಗೆ ಸೇರಿಸಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಹೌದು, ಹಾವೇರಿಯ ನರಸೀಪುರದ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈ ಕುರಿತ ಪ್ರಸ್ತಾವನೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಲುಪಿದ್ದು, ಅಂತಿಮ ಹಂತದಲ್ಲಿದೆ. ಈ ಕುರಿತು ಸಂಬಂಧಪಟ್ಟ ಸಚಿವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು, ಗಂಗಾಮತ ಪೀಠಕ್ಕೆ 10 ಕೋಟಿ ರೂ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದರು. ಈಗಾಗಲೇ 5 ಕೋಟಿ ರೂ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.