Monday, April 21, 2025
Homeಸುದ್ದಿಗಳುಕುರುಭತ್ತೂರು ಗ್ರಾ.ಪಂಗೆ ಕಾಂಗ್ರೆಸ್ ಬೆಂಬಲಿತ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ

ಕುರುಭತ್ತೂರು ಗ್ರಾ.ಪಂಗೆ ಕಾಂಗ್ರೆಸ್ ಬೆಂಬಲಿತ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ

ಸಕಲೇಶಪುರ: ತಾಲೂಕಿನ ಕುರುಭತ್ತೂರು ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಕಮಲ ಅವರು ಹಾಗೂ ಉಪಾಧ್ಯಕ್ಷರಾಗಿ ಶಾಂತಮ್ಮನವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಈ ಹಿಂದೆ ಒಪ್ಪಂದದ ಪ್ರಕಾರ ಹಿಂದಿನ ಅಧ್ಯಕ್ಷರು ಉಪಾಧ್ಯಕ್ಷರು ರಾಜೀನಾಮೆ ನೀಡಿದ್ದರಿಂದ ಇಂದು ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಹೆಚ್ ಹೆಚ್ ಉದಯ್, ತಾ.ಪಂ ಮಾಜಿ ಉಪಾಧ್ಯಕ್ಷರಾದ ಕೆ ಪಿ ಕೃಷ್ಣೇಗೌಡರು, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ ಟಿ ಕಿರಣ್, ಗ್ರಾ.ಪಂ ಸದಸ್ಯ ಅರ್ಜುನ್, ಹಾಸನ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಬಿಡಿ ವಿಜಯ್, ಕಾಂಗ್ರೆಸ್ ಮುಖಂಡರಾದ ಮಂಜು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ವೀರಭಧ್ರ, ಚಲನಚಿತ್ರ ನಟ ಸಂತೋಷ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಬಿಳಿ ತಾಳು ರಾಜೇಗೌಡ್ರು ಸೇರಿದಂತೆ ಇತರರು ಭಾಗವಹಿಸಿದ್ದರು

RELATED ARTICLES
- Advertisment -spot_img

Most Popular