Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : ಬೊಬ್ಬನಹಳ್ಳಿ  ಶ್ರೀ ಮಲ್ಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ಸಕಲೇಶಪುರ : ಬೊಬ್ಬನಹಳ್ಳಿ  ಶ್ರೀ ಮಲ್ಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

 

 ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಇತಿಹಾಸ ಪ್ರಸಿದ್ಧ ಬೊಬ್ಬನಹಳ್ಳಿ  ಗ್ರಾಮದಲ್ಲಿ ಶ್ರೀ ಮಲ್ಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಬುಧುವಾರ ಅದ್ದೂರಿಯಾಗಿ ಜರುಗಿತು.

 ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಒಂದೆಡೆ ಸೇರಿ  ಮಲ್ಲೇಶ್ವರ ಸ್ವಾಮಿಯ ದರ್ಶನ ಪಡೆದರು.

 ಈ ವೇಳೆ ಆಲೂರು ಕಟ್ಟಾಯ ಸಕಲೇಶಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ  ಮುರಳಿ ಮೋಹನ್ ರವರು ದೇವರ ದರ್ಶನ ಪಡೆದು ಮಲ್ಲೇಶ್ವರ ಸ್ವಾಮಿ ತಾಲೂಕಿನ ಜನತೆಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.

 ಈ ಸಂದರ್ಭದಲ್ಲಿ   ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೃಷ್ಣೇಗೌಡ, ಕಿರಣ್, ಗ್ರಾಮಸ್ಥರು ಇದ್ದರು.

RELATED ARTICLES
- Advertisment -spot_img

Most Popular