ಕಸಬಾ ಹೋಬಳಿ ಬೆಳೆಗಾರರ ಸಂಘದಿಂದ ಉಪವಿಭಾಗಾಧಿಕಾರಿಗಳಿಗೆ ಶುಭ ಹಾರೈಕೆ.
ಸಕಲೇಶಪುರ :- ತಮ್ಮ ವಿಶಿಷ್ಟ ಕಾರ್ಯದೊಂದಿಗೆ ಖಡಕ್ ಅಧಿಕಾರಿ ಎನಿಸಿಕೊಂಡಿದ್ದ ಉಪವಿಭಗಾಧಿಕಾರಿ ಪ್ರತೀಕ್ ಬಾಯಲ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕಸಬಾ ಹೋಬಳಿ ಬೆಳೆಗಾರರ ಸಂಘದಿಂದ ಸನ್ಮಾನಿಸಲಾಯಿತು. ಇದೇ ವೇಳೆ ನೂತನ ಉಪವಿಭಾಗಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಅನ್ ಮೋಲ್ ಜೈನ್ ಅವರಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಕಸಬಾ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷರಾದ ಲೋಹಿತ್ ಕೌಡಳ್ಳಿ, ಕಾರ್ಯದರ್ಶಿ ಚಂದ್ರಶೇಖರ್, ಗಿರೀಶ್ ಹಲಸುಲಿಗೆ, ರಾಕೇಶ್ ನಟ್ಟಹಳ್ಳಿ. ಸೋಮಶೇಖರ್ ಹಾಲೇಬೇಲೂರ್ ಇದ್ದರು.