Monday, April 14, 2025
Homeಸುದ್ದಿಗಳುಸಕಲೇಶಪುರಪಶ್ಚಿಮ ಬಂಗಾಳ ಮೂಲದ ಕಾರ್ಮಿಕರ ಮೇಲೆ ಕಾಡಾನೆ ದಾಳಿ.

ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರ ಮೇಲೆ ಕಾಡಾನೆ ದಾಳಿ.

ಪಶ್ಚಿಮ ಬಂಗಾಳ   ಮೂಲದ ಕಾರ್ಮಿಕರ ಮೇಲೆ ಕಾಡಾನೆ ದಾಳಿ.

 ಅಂಕಿಹಳ್ಳಿಯಲ್ಲಿ ಘಟನೆ. ಕಾರ್ಮಿಕನಿಗೆ ಗಂಭೀರ ಗಾಯ

ಸಕಲೇಶಪುರ : ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಅಂಕಿಹಳ್ಳಿಯ ಗಜೇಂದ್ರಪುರದ ಸಮೀಪ ಪಶ್ಚಿಮ ಬಂಗಾಳ  ಮೂಲದ ಗಾರೆ ಕೆಲಸದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಶುಕ್ರವಾರ ಸಂಜೆ ನೆಡೆದಿದೆ.

ಪಶ್ಚಿಮ ಬಂಗಾಳ ಮೂಲದ ದೀಪಕ ರಾಯ್ ಗಾಯಗೊಂಡಿರುವ ಕಾರ್ಮಿಕನಾಗಿದ್ದು ಅವರಿಗೆ ಸಕಲೇಶಪುರ ಕ್ರಾಪರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 ಗಾರೆ ಕೆಲಸ ಮುಗಿಸಿಕೊಂಡು ದಿನಸಿ ವಸ್ತು ಖರೀದಿಸಲು ಗ್ರಾಮದಲ್ಲಿದ್ದ  ಅಂಗಡಿಗೆ ತೆರಳುತ್ತಿದ್ದ ವೇಳೆ  ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

 ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ 

RELATED ARTICLES
- Advertisment -spot_img

Most Popular