ಹೆತ್ತೂರು:ಹೆತ್ತೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹೆತ್ತೂರು ಮಟ್ಟದ ಕಲಿಕಾ ಹಬ್ಬದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಸೂಯಾ ನೆರವೇರಿಸಿದರು.
ಈ ಸಮಾರಂಭದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್, ಕೆಪಿಎಸ್ ಪ್ರಾಂಶುಪಾಲ ಬೆಟ್ಟದಹಳ್ಳಿ ಮಂಜುನಾಥ್, ನಿವೃತ್ತ ಶಿಕ್ಷಕ ಶ್ರೀ ಲವ, ಶಾಲಾಭಿವೃದ್ಧಿ ಸದಸ್ಯ ಹರೀಶ್ ಕರಡಿಗಾಲ, ಉಪಪ್ರಾಂಶುಪಾಲೆ ಲತಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶಾರಾದ, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷೆ ದೇವಕಿ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಣ ಸಂಯೋಜಕ ನಜೀಬ್ ಪಾಷಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುನಾಥ ಈ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಹೆತ್ತೂರು ಕ್ಲಸ್ಟರ್ ವ್ಯಾಪ್ತಿಯ ಎರಡು ಪ್ರೌಢಶಾಲೆ ಮತ್ತು ಹತ್ತು ಪ್ರಾಥಮಿಕ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿ