Wednesday, September 17, 2025
Homeಸುದ್ದಿಗಳುಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕೃಷ್ಣೆಗೌಡರನ್ನು ಭೇಟಿ ಮಾಡಿ ಅರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕೃಷ್ಣೆಗೌಡರನ್ನು ಭೇಟಿ ಮಾಡಿ ಅರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕೃಷ್ಣೆಗೌಡರನ್ನು ಭೇಟಿ ಮಾಡಿ ಅರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ : ತೋಟಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ಎಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಶಾಸಕ ಸಿಮೆಂಟ್ ಮಂಜುನಾಥ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ತಾಲೂಕಿನ ಬಿರಡಹಳ್ಳಿ ಗ್ರಾಮದ ಕೃಷ್ಣೆಗೌಡ ನೆನ್ನೆ ತೋಟಕ್ಕೆ ತೆರಳುವ ವೇಳೆ ಕಾಡಾನೆ ದಾಳಿ ನೆಡೆಸಿತ್ತು. ತಕ್ಷಣವೇ ಅವರನ್ನು ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ ದಾಖಲು ಮಾಡಲಾಗಿತ್ತು. ಇಂದು ಜಿಲ್ಲಾ ಆಸ್ಪತ್ರೆಗೆ ತೆರಳಿದ ಶಾಸಕ ಸಿಮೆಂಟ್ ಮಂಜು ಕೃಷ್ಣೆಗೌಡರ ಆರೋಗ್ಯ ವಿಚಾರಿಸಿ ನಂತರ ವೈದ್ಯರ ಜೊತೆ ಗಾಯಾಳುವಿನ ಆರೋಗ್ಯದ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡರು. ಗಾಯಾಳು ಕೃಷ್ಣೆಗೌಡರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ನೀಡುವಂತೆ ವೈದ್ಯರಿಗೆ ಈ ಸಂದರ್ಭದಲ್ಲಿ ಸೂಚನೆ ನೀಡಿದರು.

RELATED ARTICLES
- Advertisment -spot_img

Most Popular