Tuesday, May 20, 2025
Homeಸುದ್ದಿಗಳುನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್, ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಪೀಕಲಾಟ

ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್, ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಪೀಕಲಾಟ

ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್, ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಪೀಕಲಾಟ

ಸಕಲೇಶಪುರ: ತಾಲ್ಲೂಕಿನ ಬಾಳ್ಳುಪೇಟೆ – ಬಾಗೆ-ಮೂಲಕ ಕೊಡ್ಲಿಪೇಟೆ ಹೋಗುತ್ತಿದ್ದ ಬಸ್ ಬಾಗೆ ಗ್ರಾಮದ ಬಳಿ ಕೆಟ್ಟು ನಿಂತಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿ ಸಾರಿಗೆ ಇಲಾಖೆ ವಿರುದ್ಧ ಹಿಡಿಶಾಪ ಹಾಕಿದ ಘಟನೆ ನೆಡೆದಿದೆ.

ಸಕಲೇಶಪುರ ಘಟಕದಿಂದ ಹೊರಟKA18 F0524 ನಂಬರಿನ ಬಸ್ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದರಿಂದ ವಾಹನ ಸವಾರರು ಪರದಾಡುವಾಯಿತು.

ಸಂಚಾರಕ್ಕೆ ಯೋಗ್ಯವಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಹುತೇಕವಾಗಿ ಗ್ರಾಮೀಣ ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ. ದಿನನಿತ್ಯ ಬಸ್ ಗಳು ಒಂದಲ್ಲ ಒಂದು ಕಾರಣಕ್ಕಾಗಿ ಕೆಟ್ಟ ನಿಲ್ಲುತ್ತಿದೆ ಎಂದು ಸಾರಿಗೆ ಅಧಿಕಾರಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಹೊಸಕೊಪ್ಪಲು ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.ನಿರಂತರವಾಗಿ ಬಸ್‌ಗಳಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಈ‌ ಮಾರ್ಗಕ್ಕೆ ಗುಣಮಟ್ಟದ ಹಾಗೂ ಸುಸ್ಥಿತಿಯಲ್ಲಿ ರುವ ಬಸ್‌ಗಳನ್ನು ಓಡಿಸಲು ಮನಸ್ಸು ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಚಾಲಕರ ಅಸಹಾಯಕತೆ : ಸಂಚಾರಕ್ಕೆ ಯೋಗ್ಯವಲ್ಲದ ಬಸ್‌ಗಳು ಚಾಲಕರಿಗೆ ತಲೆನೋವಾಗಿ ಪರಿಣಮಿಸಿದೆ. ಮಾರ್ಗ ಮಧ್ಯೆ ತಾಂತ್ರಿಕ ದೋಷಗಳಿಂದ ಇದ್ದಕ್ಕಿದ್ದಂತೆ ಬಸ್ ಕೆಟ್ಟು ನಿಲ್ಲುತ್ತದೆ. ಪ್ರಯಾಣಿಕರು ನಮಗೆ ಬೈಯುತ್ತಾರೆ. ಸಾರಿಗೆ ಇಲಾಖೆ ಯೋಗ್ಯವಲ್ಲದ ಬಸ್‌ಗಳನ್ನು ಸಂಚಾರಕ್ಕೆ ಬಿಡಬಾರದು. ಹೊಸ ಬಸ್ ಸಂಚರಿಸುವಂತೆ ಮಾಡಬೇಕು ಎಂದು ಚಾಲಕರೊಬ್ಬರು ವಾಸ್ತವ ನ್ಯೂಸ್ ಗೆ ಪ್ರತಿಕ್ರಿಯಿಸಿದರು

RELATED ARTICLES
- Advertisment -spot_img

Most Popular