Monday, March 24, 2025
Homeಸುದ್ದಿಗಳುಸಕಲೇಶಪುರBreaking News ಸಕಲೇಶಪುರ : ಕ್ಷುಲ್ಲಕ ಕಾರಣಕ್ಕೆ ಬಿಯರ್ ಬಾಟಲಿಯಿಂದ ಹೊಟ್ಟೆಗೆ ತಿವಿದ ಪಾಪಿ.

Breaking News ಸಕಲೇಶಪುರ : ಕ್ಷುಲ್ಲಕ ಕಾರಣಕ್ಕೆ ಬಿಯರ್ ಬಾಟಲಿಯಿಂದ ಹೊಟ್ಟೆಗೆ ತಿವಿದ ಪಾಪಿ.

Breaking News ಸಕಲೇಶಪುರ : ಕ್ಷುಲ್ಲಕ ಕಾರಣಕ್ಕೆ ಬಿಯರ್ ಬಾಟಲಿಯಿಂದ ಹೊಟ್ಟೆಗೆ ತಿವಿದ ಪಾಪಿ.

ಗಾಯಳು ಮಿಲನ್ ಸ್ಥಿತಿ ಗಂಭೀರ : ಆರೋಪಿ ಹರೀಶ್ ಪರಾರಿ.

ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಸಕಲೇಶಪುರ :- ತಾಲೂಕಿನ ಯಸಳೂರು ಹೋಬಳಿ ಮಾಗಲು ಗ್ರಾಮದಲ್ಲಿ ಯುವಕನೊಬ್ಬನಿಗೆ ಬಿಯರ್ ಬಾಟಲಿಯಿಂದ ಹೊಟ್ಟೆಗೆ ತಿವಿದಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಮಾಗಲು ಗ್ರಾಮದ ಮಿಲನ್ (28) ಎಂಬುವರ ಜೊತೆ ಅದೇ ಗ್ರಾಮದ ಹರೀಶ್ ಎಂಬಾತ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದು ಬಿಯರ್ ಬಾಟಲಿಯಿಂದ ಹೊಟ್ಟೆ ಭಾಗಕ್ಕೆ ಬಲವಾಗಿ ತಿವಿದ ಹಿನ್ನೆಯಲ್ಲಿ ತೀವ್ರವಾಗಿ ಗಾಯಗೊಂಡ ಮಿಲನನ್ನು ಸಕಲೇಶಪುರ ಕಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಗಂಭೀರ ಸ್ಥಿತಿಯಲ್ಲಿರುವ ಮಿಲನನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೃತ್ಯ ನಡೆಸಿದ ಹರೀಶ ಪರಾರಿಯಾಗಿದ್ದು ಹರೀಶನನ್ನು ಕೂಡಲೇ ಬಂಧಿಸಿ ಕಾನೂನು ಶಿಕ್ಷೆಗೆ ಗುರಿಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಸಂಬಂಧ ಮಿಲನ್ ಸಹೋದರ ಚೇತನ್ ನಿರಂತರ ನ್ಯೂಸ್ ನೊಂದಿಗೆ ಮಾತನಾಡಿ ಪೊಲೀಸರು ಪರಾರಿಯಾಗಿರುವ ಹರೀಶ್ ನನ್ನು ಬಂಧಿಸಬೇಕೆಂದು ಯಸಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED ARTICLES
- Advertisment -spot_img

Most Popular