ಸಕಲೇಶಪುರ : ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ ಶರಣು.
ಸಕಲೇಶಪುರ : ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಹಾಗೂ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಅವರ ಮಾಜಿ ಆಪ್ತಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆ ಶರಣಾಗಿರುವ ಘಟನೆ, ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್ನಲ್ಲಿ ನಡೆದಿದೆ.
ಶೃತಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ. ತಾಲ್ಲೂಕಿನ, ಕಲ್ಗಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು. ಇಂದು ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥಗೊಂಡಿದ ಅವರನ್ನು ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತ ಶಿಕ್ಷಕಿಯ ಅಂತ್ಯಕ್ರಿಯೆ ಆಲೂರು ತಾಲೂಕಿನ ಗಂಜಿಗೆರೆಯಲ್ಲಿ ಭಾನುವಾರ ಜರುಗಲಿದೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಶ್ರುತಿ ನಾನು ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ನನ್ನ ಗಂಡನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ನನ್ನ ಮಕ್ಕಳನ್ನು ಚೆನ್ನಾಗಿ ಓದಿಸಿ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ.